ಕಲಬುರಗಿ : ನೃತ್ಯ ಮಾಡುತ್ತಿದ್ದ ವೇಳೆಯೇ ಏಕಾಏಕಿ ಕುಸಿದು ಬಿದ್ದು ಯುವಕ ಸಾವು

ಕಲಬುರಗಿ: ಅಂಬೇಡ್ಕರ್ ಜಯಂತಿಯ ಮೆರವಣಿಗೆಯ ವೇಳೆ ನೃತ್ಯ ಮಾಡುತ್ತಿದ್ದ ಯುವಕನೋರ್ವ ಏಕಾಏಕಿ ಕುಸಿದು ಬಿದ್ದು ಮೃತಪಟ್ಟ ಘಟನೆ ಕಲಬುರಗಿ ತಾಲೂಕಿನ ಹತಗುಂದಾ ಗ್ರಾಮದಲ್ಲಿ ನಡೆದಿದೆ. ಯಳವಂತಗಿ ಗ್ರಾಮದ ನಿವಾಸಿ ಸಚಿನ್‌ ಪರಮೇಶ್ವರ ಮಾನೆ (22) ಎಂಬುವರು ಮೃತ ದುರ್ದೈವಿಯಾಗಿದ್ದಾರೆ.

ಡಾ. ಬಿ.ಆರ್. ಅಂಬೇಡ್ಕರ್ ಜಯಂತಿಯ ಅಂಗವಾಗಿ ಹತಗುಂದಾ ಗ್ರಾಮದಲ್ಲಿ ಮೆರವಣಿಗೆ ನಡೆಯುತ್ತಿತ್ತು. ಈ ವೇಳೆ ಸಚಿನ್‌ ಸ್ನೇಹಿತರ ಜೊತೆಯಲ್ಲಿ ನೃತ್ಯ ಮಾಡುತ್ತಿದ್ದ ವೇಳೆ‌ ಏಕಾಏಕಿ ಕುಸಿದು ಬಿದ್ದಿದ್ದಾನೆ. ಕೂಡಲೇ ಯುವಕನನ್ನು ಜಿಮ್ಸ್ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ, ಚಿಕಿತ್ಸೆ ನೀಡುವ ಮುನ್ನವೇ ಮಾರ್ಗಮಧ್ಯೆ ಯುವಕ ಸಾವನ್ನಪ್ಪಿದ್ದಾನೆ.

ಈ ಸಂಬಂಧ ಕಲಬುರಗಿ ಸಬರ್ಬನ್‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ, ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ.

Author:

...
Sushmitha N

Copy Editor

prajashakthi tv

share
No Reviews