ರಾಯಚೂರು:
ತಡವಾಗಿ ಮನೆಗೆ ಬರುತ್ತಿದ್ದ ಕಾರಣ ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರಿನ ಶಕ್ತಿನಗರದಲ್ಲಿ ನಡೆದಿದೆ.ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಸುದೀಪ್ ಕುಮಾರ್ (21) ಎಂದು ಗುರುತಿಸಲಾಗಿದೆ. ಆತನು ಖಾಸಗಿ ಫಾರ್ಮಾ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದ.
ಪ್ರತಿ ದಿನವೂ ತಡವಾಗಿ ಮನೆಗೆ ಬರುತ್ತಿದ್ದ ಸುದೀಪ್ ಮೇಲೆ ಪೋಷಕರು ಬೈದು, ಬುದ್ಧಿವಾದ ಹೇಳಿದ್ದರು. ಈ ಮಾತುಗಳಿಂದ ಮನನೊಂದು, ಸುದೀಪ್ ಮದ್ಯಪಾನ ಮಾಡಿಕೊಂಡ ಸ್ಥಿತಿಯಲ್ಲಿ ದುಡುಕಿನ ನಿರ್ಧಾರ ತೆಗೆದುಕೊಂಡು, ಮನೆ ಮುಂದಿರುವ ವಿದ್ಯುತ್ ಕಂಬಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇನ್ನು ಈ ಸಂಬಂಧ ಶಕ್ತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸ ರು ತನಿಖೆ ಮುಂದುವರಿಸಿದ್ದಾರೆ.