ಕೊಪ್ಪಳ : ಕುಷ್ಟಗಿಯ ತಾವರಗೇರಾದಲ್ಲಿ ಆಸ್ತಿ ವಿವಾದಕ್ಕೆ ಯುವಕನ ಹತ್ಯೆ

ಕೊಪ್ಪಳ : ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾ ಪಟ್ಟಣದಲ್ಲಿ ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಎರಡು ಕುಟುಂಬಗಳ ನಡುವೆ ಜಗಳ ನಡೆದು ಯುವಕನ ಹತ್ಯೆಮಾಡಿರುವಂತಹ ಘಟನೆ ನಡೆದಿದೆ. ತಾವರಗೇರಾ ಪಟ್ಟಣದ ನಿವಾಸಿ ಚೆನ್ನಪ್ಪ ನಾರಿನಾಳ (35) ಕೊಲೆಯಾದ ಮೃತ ದುರ್ದೈವಿ.  

ಚೆನ್ನಪ್ಪ ನಾರಿನಾಳ ಮತ್ತು ರವಿ ನಾರಿನಾಳ ಕುಟುಂಬಗಳ ನಡುವೆ ಆಸ್ತಿ ಸಂಬಂಧಿತ ವಿಚಾರವಾಗಿ ವಾಗ್ವಾದ ನಡೆದಿದ್ದು, ಜಗಳ ಅತಿರೇಕಕ್ಕೆ ತಿರುಗಿ ರವಿ ನಾರಿನಾಳ ಹಾಗೂ ಅವರ ಸಹಚರರು ಮಚ್ಚುಗಳಿಂದ ಚೆನ್ನಪ್ಪನನ್ನು ಕೊಚ್ಚಿ ಕೊಲೆ ಮಾಡಿದ್ದಾರೆ.

ತಾವರಗೇರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಹಿಂದೆಯೂ ಈ ಕುಟುಂಬಗಳ ನಡುವೆ ಕಲಹ ಸಂಬಂಧಿತ ಹಲವು ಪ್ರಕರಣಗಳು ದಾಖಲಾಗಿದ್ದು, ಕೆಲವರ ವಿರುದ್ಧ ರೌಡಿಶೀಟ್‌ಗಳೂ ತೆರೆಯಲ್ಪಟ್ಟಿವೆ ಎಂಬ ಮಾಹಿತಿ ಪೊಲೀಸರಿಂದ ಲಭಿಸಿದೆ.

ಇನ್ನು ಈ ಹತ್ಯೆ ಪ್ರಕರಣದಲ್ಲಿ ಒಟ್ಟು 10 ಮಂದಿಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದ್ದು, ಈಗಾಗಲೇ ಇಬ್ಬರನ್ನು ಬಂಧಿಸಲಾಗಿದೆ. ಇನ್ನುಳಿದ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

Author:

...
Sushmitha N

Copy Editor

prajashakthi tv

share
No Reviews