ಆರೋಪಿ Darshan ಗೆ ಅತಿದೊಡ್ಡ ಸಂಕಷ್ಟ; ಪ್ರಕರಣದ ಎ-14 ಪ್ರದೋಷ್ನಿಂದ ಮಾಫಿ ಸಾಕ್ಷಿಗೆ ಅರ್ಜಿ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ಗೆ ಹೊಸ ಕಾನೂನು ಸಂಕಷ್ಟ ಎದುರಾಗಿದೆ. ಪ್ರಕರಣದ ಎ-14 ಆರೋಪಿ ಪ್ರದೋಷ್, ತನ್ನನ್ನು ಮಾಫಿ ಸಾಕ್ಷಿ (Approver) ಯಾಗಿ ಪರಿಗಣಿಸುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾನೆ.

ನಾನು ಸತ್ಯವನ್ನೇ ಹೇಳುತ್ತೇನೆ
ಪ್ರದೋಷ್ ಸಲ್ಲಿಸಿರುವ ಅರ್ಜಿಯಲ್ಲಿ, ಪ್ರಕರಣಕ್ಕೆ ಸಂಬಂಧಿಸಿದಂತೆ ತಾನು ನಡೆದ ಘಟನಾವಳಿಗಳನ್ನು ಸತ್ಯವಾಗಿ ನ್ಯಾಯಾಲಯದ ಮುಂದೆ ಹೇಳಲು ಸಿದ್ಧನಿದ್ದೇನೆ ಎಂದು ಪ್ರದೂಷ್ ಹೇಳಿದ್ದಾನೆ. ಈ ಸಂಬಂಧ ಇಂದು ಮಧ್ಯಾಹ್ನ 12 ಗಂಟೆಗೆ ಜೈಲಿನಿಂದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರ ಮುಂದೆ ಪ್ರದೋಷ್ ಹಾಜರಾಗಲಿದ್ದು, ಅರ್ಜಿಯ ಕುರಿತು ವಿಚಾರಣೆ ನಡೆಯಲಿದೆ.
ನ್ಯಾಯಾಧೀಶರ ಮುಂದೆ ಹಾಜರಾಗಿ ಪ್ರಕರಣದಲ್ಲಿ ಘಟನಾವಳಿಗಳ ಬಗ್ಗೆ ಆರೋಪಿ ಹೇಳಲಿದ್ದಾನೆ. ಈ ಹಿಂದೆ ವಿನಯ್ ಕುಲಕರ್ಣಿ ಪ್ರಕರಣದಲ್ಲಿ ಬಸವರಾಜ್ ಮುತ್ತಗಿ ಮಾಫಿ ಸಾಕ್ಷಿಯಾಗಿದ್ದ. ಹೀಗಾಗಿ, ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಆಗಿತ್ತು. ಈಗ ದರ್ಶನ್ ಪ್ರಕರಣದಲ್ಲಿ ಪ್ರದೋಷ್ ಮಾಫಿ ಸಾಕ್ಷಿಯಾಗಿದ್ದಾನೆ.
ಇದನ್ನು ಓದಿ : Darshan ಬರ್ತ್ಡೇ ಸೆಲೆಬ್ರೇಶನ್ಗೆ ಮುಗಿಬಿದ್ದ ಫ್ಯಾನ್ಸ್ – ಹೈಡ್ರಾಮಾ ಮಾಡಿದವನಿಗೆ ಕಪಾಳಮೋಕ್ಷ!

ಪ್ರಕರಣದಲ್ಲಿ ಪ್ರದೋಷ್ ಪಾತ್ರ ಏನು?
ಸ್ಟೋನಿ ಬ್ರೂಕ್ನಿಂದ ಬಂದ ದರ್ಶನ್ ಜೊತೆ ಪ್ರದೋಷ್ ಶೆಡ್ಗೆ ಹೋಗಿದ್ದ. ಹಲ್ಲೆ ಮಾಡುವಾಗ ಸ್ಥಳದಲ್ಲಿಯೇ ಆರೋಪಿ ಇದ್ದ. ರೇಣುಕಾಸ್ವಾಮಿಯಗೆ ʼಹೊಡೆಯೋದು ಸಾಕು ನಿಲ್ಲಿಸಿ ಸತ್ತು ಹೋಗ್ತಾನೆ ಎಂದಿದ್ದ.ʼ( ಪೊಲೀಸರ ಹೇಳಿಕೆಯಲ್ಲಿ ಇದೆ). ಇನ್ನು ಮೃತದೇಹ ಸಾಗಿಸುವ ಸಂಬಂಧ ಸಬ್ ಇನ್ಸ್ಪೆಕ್ಟರ್ಗೆ ಪ್ರದೋಷ್ ಕರೆ ಮಾಡಿದ್ದಾನೆ ಎನ್ನಲಾಗಿದ್ದು, ಶವ ಸಾಗಿಸುವವರೆಗೂ ದರ್ಶನ್ ಜೊತೆಯಲ್ಲೇ ಇದ್ದ.
ಇದನ್ನು ನೋಡಿ : KPSC ನೇಮಕಾತಿಯಲ್ಲಿ ಅಕ್ರಮ ಆರೋಪ – ABVPಯಿಂದ ಸಹಿ ಸಂಗ್ರಹ ಅಭಿಯಾನ





